ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .
ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…