ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…