ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…