ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…