ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…