ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…