ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.
ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…