ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

February 28, 2020
12:07 PM

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

Advertisement
Advertisement

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್
May 24, 2025
10:56 PM
by: The Rural Mirror ಸುದ್ದಿಜಾಲ
ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |
May 24, 2025
10:45 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ
May 24, 2025
9:23 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |
May 24, 2025
4:43 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group