ಸುದ್ದಿಗಳು

ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

Advertisement
Advertisement

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

6 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

7 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

10 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

11 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

11 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago