ಸುದ್ದಿಗಳು

ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

Advertisement

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

4 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

5 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

5 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

5 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

15 hours ago

ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ

ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…

15 hours ago