Advertisement
ಸುದ್ದಿಗಳು

ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Share

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

5 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

5 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

13 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

23 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago