Advertisement
ಸುದ್ದಿಗಳು

ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Share

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago