Advertisement
ಸುದ್ದಿಗಳು

ಸಂಕಷ್ಟದಲ್ಲಿರುವ ಶಾಲೆ, ದೇವಸ್ಥಾನಕ್ಕೆ ಜಾಗತಿಕ ಬಂಟರ ಸಂಘ ನೆರವು: ಐಕಳ

Share

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಈಗಾಗಲೇ ನೆರವು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲೂ ಅದನ್ನು ಮುಂದುವರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಸಂಘದ ಪ್ರಥಮ ಗ್ರಾಮ ವಾಸ್ತವ್ಯ ನಡೆದ ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನ ವಿತರಿಸಿ ಅವರು ಮಾತನಾಡಿದರು. ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಮುಂಬಯಿಯ ಉದ್ಯಮಿಗಳು, ದಾನಿಗಳ ಸಹಾಯದಿಂದ ಸಾಮಾಜಿಕ ಸೇವೆಯನ್ನು ಮಾಡುತ್ತಿವೆ. ಕಳೆದ ಎರಡು ವರ್ಷಗಳಿಂದ ಸಂಘದಿಂದ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ವಿಶೇಷ ನೆರವನ್ನು ನೀಡುತ್ತಾ ಬರಲಾಗಿದೆ. ಸಹಕಾರ ಕೇಳಿ ಬಂದ ಯಾವುದೇ ಮನವಿಯನ್ನು ಈವರೆಗೆ ತಿರಸ್ಕಾರ ಮಾಡಿಲ್ಲ. ಜಾಗತಿಕ ಬಂಟರ ಸಂಘದಿಂದ ಕುತ್ಲೂರು ಶಾಲೆಯ ಪೀಠೋಪಕರಣಕ್ಕೆ ಮತ್ತು ಆ ಶಾಲೆಯ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಚೆಕ್ ಹಸ್ತಾಂತರ ಮಾಡಲಾಗಿದೆ. ಕುತ್ಲೂರು ಶಾಲೆಯನ್ನು ಸಂಘ ದತ್ತು ತೆಗೆದುಕೊಳ್ಳುವ ಬೇಡಿಕೆ ಬಂದಿದ್ದು ಸಂಘದ ಸಭೆಯಲ್ಲಿ ಪ್ರಸ್ತಾಪ ಮಾಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕುತ್ಲೂರು ಸರಕಾರಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಮಚಂದ್ರ ಭಟ್ ಮಾತನಾಡಿ, ಜಾಗತಿಕ ಬಂಟರ ಸಂಘದಿಂದ ಶಾಲೆಗೆ ನೀಡಿದ ಸಹಕಾರ ನಿಜಕ್ಕೂ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದೆ. ದ.ಕ. ಜಿಲ್ಲಾ ಪತ್ರಕರ್ತರ ಸಂಘ ಶಾಲೆಯಲ್ಲಿ ಗ್ರಾಮವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದ್ದು, ಶಾಲೆಗೆ ತುಂಬಾ ಅನುಕೂಲವಾಗಿದೆ ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯ, ಬ್ರ್ಯಾಂಡ್‌ಮಂಗಳೂರು, ಪತ್ರಕರ್ತರಿಗೆ ಕಾರ್ಯಾಗಾರ, ಪತ್ರಕರ್ತರ ಆರೋಗ್ಯ ಶಿಬಿರದಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಗ್ರಾಮವಾಸ್ತವ್ಯದಲ್ಲಿ ಪತ್ರಕರ್ತರ ಸಂಘ ನೀಡಿದ ಬಹುತೇಕ ಬೇಡಿಕೆಗಳನ್ನು ದಾನಿಗಳು, ಅಧಿಕಾರಿಗಳ ಸಹಕಾರಿಂದ ಈಡೇರಿಸಲಾಗಿದೆ ಎಂದರು.

ದಾನಿಗಳಾದ ಜಾಗತಿಕ ಬಂಟರ ಸಂಘದಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನ ಟ್ರಸ್‌ನ ಅಧ್ಯಕ್ಷ ಆನಂದ್ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕೋಟ್ಯಾನ್ ಪಡು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

7 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

9 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

9 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

18 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

21 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago