Advertisement
ಸುದ್ದಿಗಳು

ಸಂಕಷ್ಟದಲ್ಲಿರುವ ಶಾಲೆ, ದೇವಸ್ಥಾನಕ್ಕೆ ಜಾಗತಿಕ ಬಂಟರ ಸಂಘ ನೆರವು: ಐಕಳ

Share

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಈಗಾಗಲೇ ನೆರವು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲೂ ಅದನ್ನು ಮುಂದುವರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಸಂಘದ ಪ್ರಥಮ ಗ್ರಾಮ ವಾಸ್ತವ್ಯ ನಡೆದ ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನ ವಿತರಿಸಿ ಅವರು ಮಾತನಾಡಿದರು. ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಮುಂಬಯಿಯ ಉದ್ಯಮಿಗಳು, ದಾನಿಗಳ ಸಹಾಯದಿಂದ ಸಾಮಾಜಿಕ ಸೇವೆಯನ್ನು ಮಾಡುತ್ತಿವೆ. ಕಳೆದ ಎರಡು ವರ್ಷಗಳಿಂದ ಸಂಘದಿಂದ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ವಿಶೇಷ ನೆರವನ್ನು ನೀಡುತ್ತಾ ಬರಲಾಗಿದೆ. ಸಹಕಾರ ಕೇಳಿ ಬಂದ ಯಾವುದೇ ಮನವಿಯನ್ನು ಈವರೆಗೆ ತಿರಸ್ಕಾರ ಮಾಡಿಲ್ಲ. ಜಾಗತಿಕ ಬಂಟರ ಸಂಘದಿಂದ ಕುತ್ಲೂರು ಶಾಲೆಯ ಪೀಠೋಪಕರಣಕ್ಕೆ ಮತ್ತು ಆ ಶಾಲೆಯ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಚೆಕ್ ಹಸ್ತಾಂತರ ಮಾಡಲಾಗಿದೆ. ಕುತ್ಲೂರು ಶಾಲೆಯನ್ನು ಸಂಘ ದತ್ತು ತೆಗೆದುಕೊಳ್ಳುವ ಬೇಡಿಕೆ ಬಂದಿದ್ದು ಸಂಘದ ಸಭೆಯಲ್ಲಿ ಪ್ರಸ್ತಾಪ ಮಾಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕುತ್ಲೂರು ಸರಕಾರಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಮಚಂದ್ರ ಭಟ್ ಮಾತನಾಡಿ, ಜಾಗತಿಕ ಬಂಟರ ಸಂಘದಿಂದ ಶಾಲೆಗೆ ನೀಡಿದ ಸಹಕಾರ ನಿಜಕ್ಕೂ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದೆ. ದ.ಕ. ಜಿಲ್ಲಾ ಪತ್ರಕರ್ತರ ಸಂಘ ಶಾಲೆಯಲ್ಲಿ ಗ್ರಾಮವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದ್ದು, ಶಾಲೆಗೆ ತುಂಬಾ ಅನುಕೂಲವಾಗಿದೆ ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯ, ಬ್ರ್ಯಾಂಡ್‌ಮಂಗಳೂರು, ಪತ್ರಕರ್ತರಿಗೆ ಕಾರ್ಯಾಗಾರ, ಪತ್ರಕರ್ತರ ಆರೋಗ್ಯ ಶಿಬಿರದಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಗ್ರಾಮವಾಸ್ತವ್ಯದಲ್ಲಿ ಪತ್ರಕರ್ತರ ಸಂಘ ನೀಡಿದ ಬಹುತೇಕ ಬೇಡಿಕೆಗಳನ್ನು ದಾನಿಗಳು, ಅಧಿಕಾರಿಗಳ ಸಹಕಾರಿಂದ ಈಡೇರಿಸಲಾಗಿದೆ ಎಂದರು.

ದಾನಿಗಳಾದ ಜಾಗತಿಕ ಬಂಟರ ಸಂಘದಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನ ಟ್ರಸ್‌ನ ಅಧ್ಯಕ್ಷ ಆನಂದ್ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕೋಟ್ಯಾನ್ ಪಡು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

9 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

9 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

18 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

19 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago