ಸಂಗೀತಾಸಕ್ತರನ್ನು ಮಂತ್ರ ಮುಗ್ಧರನ್ನಾಗಿಸಿದ ಸಂಗೀತ ಕಛೇರಿ

February 6, 2020
9:33 PM

ಸುಳ್ಯ : ಪಡುವಣ ದಿಕ್ಕಿನ ಅಲೆಗಡಲಲ್ಲಿ ಸೂರ್ಯನು ಅಸ್ತಮಯವಾಗುತ್ತಿದ್ದಂತೆ ಆರಂಭಗೊಂಡ ಸಂಗೀತ ಸಾಗರದ ನಾದ ತರಂಗದ ಅಲೆಯಲ್ಲಿ ಸಂಗೀತಾಸಕ್ತರು ಅಕ್ಷರಷಃ ತೇಲಿ ಹೋದರು. ಶುದ್ಧ ಸಂಗೀತದ ರಸದೌತಣವನ್ನು ಉಣಬಡಿಸಿದ ಸಂಗೀತ ಮಾಂತ್ರಿಕ ವಿದ್ವಾನ್ ಶಂಕರನ್ ನಂಬೂದಿರಿ ಅವರ ಸಂಗೀತ ಕಛೇರಿಯು ಸಂಗೀತ ಪ್ರಿಯರನ್ನು ಮೋಡಿ ಮಾಡಿತು. ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವದ ಅಂಗವಾಗಿ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ರಂಗಮಂದಿರದಲ್ಲಿ ಏರ್ಪಡಿಸಿದ ಸಂಗೀತೋತ್ಸವದ ಮುಖ್ಯ ಕಛೇರಿ ಸಂಗೀತ ಪ್ರಿಯರ ಮನದಾಳದಲ್ಲಿ ಬಹು ಕಾಲ ಉಳಿಯುವಂತೆ ಮನಮೋಹಕವಾಗಿ ಮೂಡಿ ಬಂತು.ಕಿವಿಯನ್ನು ಇಂಪಾಗಿಸಿದ ಸಂಗೀತ ರಸ ಸಂಜೆ ಹೃದಯ ತಾಳವನ್ನು ಅರಳಿಸಿತು.

Advertisement

ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ದೇವಿ ಒಲಿದ ಪ್ರಸಿದ್ಧ ಸಂಗೀತಗಾರರೂ, ಹಿನ್ನಲೆ ಗಾಯಕರೂ ಆಗಿರುವ ಶಂಕರನ್ ನಂಬೂದಿರಿ ಅವರ ಹಾಡುಗಾರಿಕೆ ಸಂಗೀತ ವಿದ್ಯಾರ್ಥಿಗಳಿಗೆ ಮತ್ತು ಸುಳ್ಯದ ಸಂಗೀತಾಸಕ್ತರಿಗೆ ಹೊಸತೊಂದು ಅನುಭವವನ್ನು ಕೊಡ ಮಾಡಿತು. ಮೂರೂವರೆ ಗಂಟೆಗೂ ಹೆಚ್ಚು ಸಮಯ ತನ್ನ ಅದ್ಭುತ ಕಂಠಸಿರಿ ಮತ್ತು ಸಂಗೀತದ ಆಳ ಅನುಭವದಿಂದ ಲೀಲಾಜಾಲವಾಗಿ ಸಂಗೀತ ಸುಧೆ ಹರಿಸಿದ ಶಂಕರನ್ ನಂಬೂದಿರಿ ನೆರೆದ ಪ್ರೇಕ್ಷಕರನ್ನು ಸಂಗೀತ ಲೋಕದ ಆಳಕ್ಕೆ ಕರೆದೊಯ್ದರು. ಹಂಸಧ್ವನಿ ರಾಗದದಲ್ಲಿ ಆದಿ ತಾಳದಲ್ಲಿ ಕನಕದಾಸರು ರಚಿಸಿದ ಕೃತಿ ನಮ್ಮಮ್ಮ ಶಾರದೆ.. ಹಾಡಿನ ಮೂಲಕ ಕಛೇರಿ ಆರಂಭಿಸಿದ ಅವರು ಖಮಾಚ್ ರಾಗ ಮತ್ತು ಆದಿ ತಾಳದಲ್ಲಿ ಮೈಸೂರು ವಾಸುದೇವಾಚಾರ್ಯರ ಬ್ರೋಚೇವಾರೆ ವರುರಾ.. ಕೀರ್ತನೆ ಮೂಲಕ ಮುಂದುವರಿದು, ಆರಭಿ ರಾಗದ ಆದಿ ತಾಳದಲ್ಲಿ ತ್ಯಾಗರಾಜ ಸ್ವಾಮಿಗಳ ನಾದಸುಧಾರಸ.. ಕೀರ್ತನೆ ಮೂಲಕ ಸಂಗೀತ ರಸಧಾರೆ ಹರಿಸಿದರು. ರವಿಚಂದ್ರಿಕೆ ರಾಗ, ಆದಿ ತಾಳದಲ್ಲಿ ಚುಟುಕಾದ ಆಲಾಪನೆಯ ತ್ಯಾಗರಾಜರ ಮಾಕೇಲರಾ… ಷಣ್ಮುಖ ಪ್ರಿಯ ರಾಗದ ವದ್ದನೆವರು.. ವಿಸ್ತಾರವಾದ ಆಲಾಪನೆ, ನೆರವಲ್, ಸ್ವರ ಪ್ತಸಾರದ ತನಿ ಆವರ್ತನದಲ್ಲಿ ಕೇಳುಗರನ್ನು ಸಂತಸದಲ್ಲಿ ತೇಲಿಸಿತು. ಕಲ್ಯಾಣಿ ರಾಗದ ಮಿಶ್ರಛಾಪು ತಾಳದ ಎಲ್ಲಾ ರಸವನ್ನು ಹರಿಸಿ ಹಾಡಿದ ನಂಬಿ ಕೆಟ್ಟವರಿಲ್ಲವೋ.. ಹಾಡು ಕೇಳುಗರನ್ನು ತಲೆದೂಗುವಂತೆ ಮಾಡಿತು. `ಸೋಮಸುಂದರ ಪ್ರಿಯ ವಾಮ ಭಾಗೇಶ್ರೀ ರಾಜ ಮಾತಂಗಿ ಪಾಹಿಮಾಂ.. ಭಾಗೇಶ್ರೀ ರಾಗ, ಖಂಡ ತ್ರಿಪುಟ ತಾಳದಲ್ಲಿ ರಾಗಂ ತಾನಂ ಪಲ್ಲವಿ ಮೋಡಿ ಮಾಡಿತು. ರಾಗ ಮಾಲಿಕೆಯಲ್ಲಿ ಕಾಪಿ ಹಾಗು ದೇಶ್ ರಾಗಗಳು ಭಾವ ಪೂರ್ಣವಾಗಿ ಹೊರ ಹೊಮ್ಮಿದವು. ಬರ್ ಸೇ ಬದರಿಯಾ.. ಮೀರಾ ಭಜನ್, ಹಿಂದೋಳದಲ್ಲಿ ದಾಸ ದಾಸರ.. ಕೀರ್ತನೆ, ಬೇಹಾಗ್ ರಾಗದ ಪಾಹಿಕೃಷ್ಣ.. ಮನಮೋಹಕವಾಗಿ ಮೂಡಿ ಬಂದಿತು. ಸಿಂಧು ಭೈರವಿ ರಾಗದ ಲಾಲ್ ಗುಡಿ ಜಯರಾಮನ್ ಅವರ ತಿಲ್ಲಾನದೊಂದಿಗೆ ಕಛೇರಿಗೆ ಮಂಗಳ ಹಾಡಿದರು.

ತ್ರಿಸ್ಥಾಯಿ ಸಂಚಾರದಲ್ಲಿನ ಹಿಡಿತ ದೃಢವಾದ ಶಾರೀರದೊಂದಿಗೆ ರಾಗದ ಒಳ ಹೊರಹುಗಳು ಸ್ಪಷ್ಟವಾಗಿ ಗೋಚರಿಸಿದ ಕಛೇರಿಯು ಅದ್ಭುತ ಸಂಗೀತ ಲೋಕವನ್ನು ತೆರೆದಿಟ್ಟಿತು. ಯಾವುದೇ ಸಂಗೀತ ಕಛೇರಿ ಕೇಳುಗರ ಮನ ಗೆಲ್ಲಲು ಹಾಡುಗಾರನಂತೆ ಪಕ್ಕ ಮೇಳದವರ ಕೊಡುಗೆಯೂ ದೊಡ್ಡದಿದೆ. ತಮ್ಮ ಅದ್ಭುತ ಕಲಾ ಪಾಂಡಿತ್ಯ, ಸಂಗೀತ ಜ್ಞಾನ ಮತ್ತು ಅನನ್ಯ ಪ್ರತಿಭೆ ಮತ್ತು ಅನುಭವವನ್ನು ಧಾರೆಯೆರೆದ ಹಿಮ್ಮೇಳ ಕಲಾವಿದರು ಕಚೇರಿಯನ್ನು ಮೇರುಸ್ತರಕ್ಕೇರಿಸಿತು. ಕಲಾವಿದರನ್ನು ಅನುಸರಿಸುತ್ತಾ ಅದ್ಭುತ ಬೆರಳ್ಗಾರಿಕೆಯಿಂದ ವಯಲಿನ್ ನಲ್ಲಿ ಸಾಥ್ ನೀಡಿದ ವಿದ್ವಾನ್ ಮೈಸೂರು ಶ್ರೀಕಾಂತ್, ಪ್ರಧಾನ ಕಲಾವಿದರ ಮನೋಧರ್ಮವನ್ನು ಅರಿತು ಮೃದಂಗ ವಾದನದ ಮೂಲಕ ನಾದ ವಿಸ್ಮಯ ಸೃಷ್ಠಿಸಿದ ವಿದ್ವಾನ್ ಕಾಂಚನ ಎ.ಈಶ್ವರ ಭಟ್, ಉತ್ತಮ ಲಯ ವಿನ್ಯಾಸದೊಂದಿಗೆ ಘಟಂ ವಾದನದಲ್ಲಿ ನಾದಲೋಕ ಸೃಷ್ಠಿಸಿದ ವಿದ್ವಾನ್ ಉಡುಪಿ ಶ್ರೀಧರ್ ಕೈಚಳಕ ಕಚೇರಿಯ ಕಳೆ ಹೆಚ್ಚಿಸಿತು. ಮೂವರು ಕಲಾವಿದರೂ ಕಚೇರಿಯುದ್ಧಕ್ಕೂ ವಯಲಿನ್, ಮೃದಂಗ, ಘಟಂನಲ್ಲಿ ತಮ್ಮ ಪ್ರತಿಭೆ ಮತ್ತು ಕೈಚಳಕವನ್ನು ತೋರ್ಪಡಿಸಿದ್ದು ವಿಶೇಷತೆಯಾಗಿತ್ತು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ಪ್ರಮುಖ ಸುದ್ದಿ

MIRROR FOCUS

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ
ನೂರಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ
August 12, 2025
7:52 AM
by: The Rural Mirror ಸುದ್ದಿಜಾಲ
ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ : ರಾಘವೇಶ್ವರ ಶ್ರೀ
August 12, 2025
7:45 AM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ
August 12, 2025
7:34 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group