Advertisement
ಸುದ್ದಿಗಳು

‘ಸಂಘಟನ್ ಪರ್ವ’ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

Share

ಮಡಿಕೇರಿ : ನಿರಂತರ ಗೆಲುವಿನ ಅಹಂನಿಂದ ಮೈಮರೆಯದೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಬಿಜೆಪಿ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಜು.6ರಿಂದ ಆ.11ರವರೆಗೆ ದೇಶಾದ್ಯಂತ ‘ಸಾಥ್ ಆಯೇ-ದೇಶ್ ಬನಾಯೇ’ ಎಂಬ ಘೋಷ ವಾಕ್ಯದೊಂದಿಗೆ ‘ಸಂಘಟನ್ ಪರ್ವ’ ಸದಸ್ಯತ್ವ ಅಭಿಯಾನ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗಾಗಿ ಕಾರ್ಯಾಗಾರ ನಡೆಯಿತು.

ನಗರದ ಜಿಲ್ಲಾ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಿ.ಟಿ.ರವಿ, ಕೊಡಗಿನಲ್ಲಿ ಮುಂದಿನ ದಿನಗಳಲ್ಲಿ 25 ಸಾವಿರ ನೂತನ ಸದಸ್ಯರನ್ನು ಬಿಜೆಪಿಗೆ ಸೇರ್ಪಡೆಗೊಳಿಸಬೇಕು. ಕಳೆದ ಬಾರಿ ಜಿಲ್ಲೆಯಲ್ಲಿ 48 ಸಾವಿರ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿರುವುದು ಶ್ಲಾಘನೀಯ ಎಂದರು. ಯಾವ ವರ್ಗ ಜತೆಗಿಲ್ಲವೋ ಅಂಥವರ ವಿಶ್ವಾಸ ಪಡೆದು ಪಕ್ಷಕ್ಕೆ ಸೇರ್ಪಡೆಗೊಳಿಸಿ. ಕೇಂದ್ರ ಸರ್ಕಾರ ಈವರೆಗೂ ಯೋಜನೆಗಳನ್ನು ಜಾರಿಗೊಳಿಸುವಾಗ ಯಾವುದೇ ಜಾತಿ, ಧರ್ಮದ ತಾರತಮ್ಯ ಮಾಡಿಲ್ಲ ಎಂಬ ಅಂಶವನ್ನು ಇಂಥವರಿಗೆ ಮನವರಿಕೆ ಮಾಡಿ. ವ್ಯಕ್ತಿಗಾಗಿ ಅಲ್ಲದೆ ದೇಶಕ್ಕಾಗಿ ಕಾರ್ಯನಿರ್ವಹಿಸುವ ಬಿಜೆಪಿ ಮುಖಂಡರ ಕಾರ್ಯವೈಖರಿಯನ್ನು ಮನದಟ್ಟು ಮಾಡಿಕೊಡಿ ಎಂದು ಕರೆ ನೀಡಿದರು. ಸಮಾನ ನಾಗರಿಕ ಸಂಹಿತೆಯಂಥ ಕಾನೂನು ಜಾರಿಯಿಂದ ದೇಶದಲ್ಲಿ ಎಲ್ಲರಿಗೂ ಸಮಾನ ನ್ಯಾಯ ದೊರಕಿದಂತಾಗುತ್ತದೆಯೇ ಹೊರತು ಈ ಕಾನೂನು ಯಾರಿಗೂ ಅನ್ಯಾಯ ಮಾಡುವುದಿಲ್ಲವೆಂದು ಅಭಿಪ್ರಾಯಪಟ್ಟರು.
ಬಿಜೆಪಿ ಒಂದೇ ಒಂದು ಸ್ಥಾನ ಗಳಿಸದ ಕೇರಳ, ತಮಿಳುನಾಡು ಸೇರಿದಂತೆ 3 ರಾಜ್ಯಗಳಲ್ಲಿ ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಪಡೆಯುವಂತೆ ಮಾಡುವುದೇ ನಮ್ಮ ಗುರಿಯಾಗಿದೆ ಎಂದೂ ರವಿ ತಿಳಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭ 6 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ ಎಂದು ಸರ್ಕಾರ ವೆಚ್ಚ ತೋರಿಸಿದೆ. ಆದರೆ, ಬಹುತೇಕ ದಾನಿಗಳೇ ಎಲ್ಲಾ ವಸ್ತು, ಪರಿಕರಗಳನ್ನು ಸಂತ್ರಸ್ತರಿಗೆ ನೀಡಿರುವಾಗ ಇಷ್ಟೊಂದು ಕೋಟಿ ರೂ. ವೆಚ್ಚವಾಗಿರುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಈ ದುರುಪಯೋಗದ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು.
ವಿಧಾನಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಹ್ಮಣಿ ಮಾತನಾಡಿ, ವಾರಣಾಸಿಯಲ್ಲಿ ಜಾರಿಗೊಳಿಸಿದಂತೆ ವೈನಾಡ್ ನಲ್ಲಿಯೂ ಸಾಕಷ್ಟು ಯೋಜನೆ ಜಾರಿಗೊಳಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಕೇರಳದಲ್ಲಿ ಬಿಜೆಪಿಗೆ 1 ಸ್ಥಾನ ಬಾರದೇ ಇದ್ದರೂ ಕ್ಷೇತ್ರದ ಪ್ರಗತಿ ಮುಖ್ಯ ಎಂಬ ಮೋದಿ ಧೋರಣೆಯೆಲ್ಲಿ, ಮೋದಿಗೆ ವೋಟ್ ಹಾಕ್ತೀರಾ ಎಂದು ಬೊಬ್ಬಿಡುತ್ತಿರುವ ಮೈತ್ರಿ ಪಕ್ಷಗಳ ಮುಖಂಡರ ಮನಸ್ಥಿತಿಯೆಲ್ಲಿ ಎಂದು ಪ್ರಶ್ನಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮನುಮುತ್ತಪ್ಪ, ರಾಜ್ಯ ಕಾರ್ಯದರ್ಶಿ ರಾಬಿನ್ ದೇವಯ್ಯ, ಮೈಸೂರಿನ ರಾಜೇಂದ್ರ, ಕಾಂತಿ ಸತೀಶ್, ರೀನಾ ಪ್ರಕಾಶ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುಜಾಕುಶಾಲಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಸದಸ್ಯತ್ವ ಅಭಿಯಾನದ ಸಂಚಾಲಕ ಶಾಂತೆಯಂಡ ರವಿಕುಶಾಲಪ್ಪ, ಜಿಲ್ಲಾ ಉಸ್ತುವಾರಿ ಉದಯಕುಮಾರ್ ಶೆಟ್ಟಿ, ಮಡಿಕೇರಿ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ಕಾರ್ಯದರ್ಶಿ ಬಿ.ಕೆ.ಅರುಣ್, ಮಡಿಕೇರಿ ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಜಿ.ಪಂ. ಸದಸ್ಯರಾದ ಮುರಳಿ ಕರಂಬಮ್ಮಯ್ಯ ಕಿರಣ್ ಕಾರ್ಯಪ್ಪ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾರ್ಯಾಗಾರದಲ್ಲಿ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

3 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago