Advertisement
ಸುದ್ದಿಗಳು

ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

Advertisement
Advertisement
Advertisement
Advertisement

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

Advertisement

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

38 mins ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

46 mins ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

56 mins ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

1 hour ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

9 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

10 hours ago