Advertisement
ಸುದ್ದಿಗಳು

ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

12 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

15 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

19 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

19 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago