Advertisement
ಸುದ್ದಿಗಳು

ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

3 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

15 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago