Advertisement
ಸುದ್ದಿಗಳು

ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

35 minutes ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

57 minutes ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

12 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

12 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

17 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

18 hours ago