ಸುದ್ದಿಗಳು

ಸಂಚಾರಿ ನಿಯಂತ್ರಣದಲ್ಲಿ ಸಮರ್ಥ ಸೇವೆ- ಗೃಹರಕ್ಷ ದಳದ ಪುಷ್ಪಾವತಿಗೆ ಸನ್ಮಾನ

Share

ಸುಳ್ಯ: ತುಂಬಿ ತುಳುಕುವ ಸುಳ್ಯ ನಗರದಲ್ಲಿ ವಾಹನ ಚಲಾಯಿಸುವುದು ಒಂದು ಸವಾಲು. ಅದೇ ರೀತಿ ದಿನಪೂರ್ತಿ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ನಿಯಂತ್ರಿಸುವುದು ನಿಜಕ್ಕೂ ಒಂದು ಸಾಹಸವೇ ಸರಿ. ಅಂತಹಾ ಸವಾಲಿನ ಕೆಲಸವನ್ನು ಅತ್ಯಂತ ಚಾಕಚಕ್ಯತೆಯಿಂದ, ಸಮರ್ಥವಾಗಿ ನಿಭಾಯಿಸುವವರು ಸುಳ್ಯದ ಗೃಹರಕ್ಷಕ ದಳದ ಸಿಬ್ಬಂದಿಗಳು. ಧೋ ಎಂದು ಸುರಿಯುವ ಮಳೆಯನ್ನೂ, ಸುಡು ಬಿಸಿಲನ್ನೂ ಲೆಕ್ಕಿಸದೆ ಸುಳ್ಯ ನಗರದ ವಾಹನ ಸಂಚಾರವನ್ನು ನಿಯಂತ್ರಿಸುವುದು ಮಹಿಳೆಯರೂ ಸೇರಿದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಅದರಲ್ಲೂ ಕಳೆದ ಹಲವು ವರ್ಷಗಳಿಂದ ವಾಹನ ಸಂಚಾರವನ್ನು ಸಮರ್ಥವಾಗಿ ನಿಯಂತ್ರಿಸುವವರು ಗೃಹರಕ್ಷಕ ದಳದ ಸಿಬ್ಬಂದಿ ಪುಷ್ಪಾವತಿ. ನ.ಒಂದರಂದು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಪುಷ್ಪಾವತಿ ಅವರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಎಸ್‌.ಅಂಗಾರ ಸನ್ಮಾನ ನೆರವೇರಿಸಿ ಇವರ ಸೇವೆಯನ್ನು ಶ್ಲಾಘಿಸಿದರು.

ಸುಳ್ಯ ನಗರದಲ್ಲಿ ಅತ್ಯಂತ ವಾಹನ ದಟ್ಟಣೆ ಉಂಟಾಗುತ್ತಿರುವುದು ಕಟ್ಟೆಕ್ಕಾರ್ ವೃತ್ತ, ಜಟ್ಟಿಪಳ್ಳ ತಿರುವು,ಜ್ಯೂನಿಯರ್ ಕಾಲೇಜು ತಿರುವು ಮತ್ತು ಜ್ಯೋತಿ ವೃತ್ತದಲ್ಲಿ ಇಲ್ಲಿ ವಾಹನ ದಟ್ಟಣೆ ಉಂಟಾಗದಂತೆ, ಅಪಘಾತ ಅಥವಾ ಯಾವುದೇ ಸಮಸ್ಯೆ ಆಗದಂತೆ ಒಂದು ನಿಮಿಷವೂ ತಡ ಮಾಡದೆ ನಾಲ್ಕು ಕಡೆಗಳಿಂದ ಹರಿದು ಬರುವ ವಾಹನಗಳನ್ನು ಅತ್ಯಂತ ನಾಜೂಕಿನಿಂದ ನಿಯಂತ್ರಿಸುತ್ತಾರೆ ಸುಳ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಉಳಿದ ಎಲ್ಲಾ ನಗರಗಳಲ್ಲಿಯೂ ಟ್ರಾಫಿಕ್ ಠಾಣೆಗಳಿದ್ದು ಟ್ರಾಫಿಕ್ ಪೊಲೀಸರೇ ವಾಹನ ಸಂಚಾರ ನಿಯಂತ್ರಿಸುತ್ತಾರೆ. ಆದರೆ ಸುಳ್ಯದಲ್ಲಿ ಸಂಚಾರಿ ಪೊಲೀಸ್ ಠಾಣೆ ಇಲ್ಲದ ಕಾರಣ ನಗರದ ಸಂಚಾರಿ ವ್ಯವಸ್ಥೆಯನ್ನು ಸುಳ್ಯ ಪೊಲೀಸ್ ಠಾಣೆಯಿಂದಲೇ ನಿಯಂತ್ರಿಸಲಾಗುತ್ತದೆ. ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳು ಸಂಚಾರಿ ಠಾಣೆಯ ಕೆಲಸವನ್ನು ನಿಭಾಯಿಸುತ್ತಾರೆ‌. ಆದುದರಿಂದಲೇ ಗೃಹರಕ್ಷಕ ದಳ ಸಿಬ್ಬಂದಿಗಳ ಪ್ರತಿನಿಧಿಯಾಗಿ ಹಲವು ವರ್ಷಗಳಿಂದ ಸಮರ್ಥವಾಗಿ ಸಂಚಾರಿ ನಿಯಂತ್ರಣವನ್ನು ನಿರ್ವಹಿಸುವ ಪುಷ್ಪಾವತಿಯವರಿಗೆ ತಾಲೂಕು ಆಡಳಿತ ಗೌರವ ಸಲ್ಲಿಸಿದೆ. ಆದುದರಿಂದ ರಾಜ್ಯೋತ್ಸವ ದಿನದ ಬಿಗ್ ಸಲ್ಯೂಟ್ ನಗರದ ಸಂಚಾರಿ ವ್ಯವಸ್ಥೆಯನ್ನು ನಿಯಂತ್ರಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗಿರಲಿ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….

ಮುಖ್ಯ ರಸ್ತೆಗೆ ಸೇರಲು ಎಂಟತ್ತು‌ ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…

2 hours ago

ಮಹಾಲಕ್ಷ್ಮಿ ರಾಜಯೋಗವು ಯಾವ ರಾಶಿಗಳಿಗೆ…?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ

ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…

12 hours ago

ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

12 hours ago

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…

1 day ago

ಸಹಕಾರಿ ಕ್ಷೇತ್ರಕ್ಕೂ ಬರಬಹುದಾ ಸಿಬಿಲ್..?‌ | ಹಾಗಿದ್ದರೆ ಸಿಬಿಲ್ ಅಂಕ ಹೆಚ್ಚಿಸುವುದು ಹೇಗಪ್ಪಾ…?

ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಷ್ಟೇ ಸಿಬಿಲ್ ಮಾಹಿತಿ ಕೇಳಲಾಗ್ತಿದೆ.ಆದರೆ ಶೀಘ್ರವಾಗಿ‌ ಸಹಕಾರಿ ಕ್ಷೇತ್ರದಲ್ಲೂ ಸಿಬಿಲ್…

1 day ago