Advertisement
ಸುದ್ದಿಗಳು

ಸಂಚಾರಿ ನಿಯಂತ್ರಣದಲ್ಲಿ ಸಮರ್ಥ ಸೇವೆ- ಗೃಹರಕ್ಷ ದಳದ ಪುಷ್ಪಾವತಿಗೆ ಸನ್ಮಾನ

Share

ಸುಳ್ಯ: ತುಂಬಿ ತುಳುಕುವ ಸುಳ್ಯ ನಗರದಲ್ಲಿ ವಾಹನ ಚಲಾಯಿಸುವುದು ಒಂದು ಸವಾಲು. ಅದೇ ರೀತಿ ದಿನಪೂರ್ತಿ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ನಿಯಂತ್ರಿಸುವುದು ನಿಜಕ್ಕೂ ಒಂದು ಸಾಹಸವೇ ಸರಿ. ಅಂತಹಾ ಸವಾಲಿನ ಕೆಲಸವನ್ನು ಅತ್ಯಂತ ಚಾಕಚಕ್ಯತೆಯಿಂದ, ಸಮರ್ಥವಾಗಿ ನಿಭಾಯಿಸುವವರು ಸುಳ್ಯದ ಗೃಹರಕ್ಷಕ ದಳದ ಸಿಬ್ಬಂದಿಗಳು. ಧೋ ಎಂದು ಸುರಿಯುವ ಮಳೆಯನ್ನೂ, ಸುಡು ಬಿಸಿಲನ್ನೂ ಲೆಕ್ಕಿಸದೆ ಸುಳ್ಯ ನಗರದ ವಾಹನ ಸಂಚಾರವನ್ನು ನಿಯಂತ್ರಿಸುವುದು ಮಹಿಳೆಯರೂ ಸೇರಿದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಅದರಲ್ಲೂ ಕಳೆದ ಹಲವು ವರ್ಷಗಳಿಂದ ವಾಹನ ಸಂಚಾರವನ್ನು ಸಮರ್ಥವಾಗಿ ನಿಯಂತ್ರಿಸುವವರು ಗೃಹರಕ್ಷಕ ದಳದ ಸಿಬ್ಬಂದಿ ಪುಷ್ಪಾವತಿ. ನ.ಒಂದರಂದು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಪುಷ್ಪಾವತಿ ಅವರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಎಸ್‌.ಅಂಗಾರ ಸನ್ಮಾನ ನೆರವೇರಿಸಿ ಇವರ ಸೇವೆಯನ್ನು ಶ್ಲಾಘಿಸಿದರು.

ಸುಳ್ಯ ನಗರದಲ್ಲಿ ಅತ್ಯಂತ ವಾಹನ ದಟ್ಟಣೆ ಉಂಟಾಗುತ್ತಿರುವುದು ಕಟ್ಟೆಕ್ಕಾರ್ ವೃತ್ತ, ಜಟ್ಟಿಪಳ್ಳ ತಿರುವು,ಜ್ಯೂನಿಯರ್ ಕಾಲೇಜು ತಿರುವು ಮತ್ತು ಜ್ಯೋತಿ ವೃತ್ತದಲ್ಲಿ ಇಲ್ಲಿ ವಾಹನ ದಟ್ಟಣೆ ಉಂಟಾಗದಂತೆ, ಅಪಘಾತ ಅಥವಾ ಯಾವುದೇ ಸಮಸ್ಯೆ ಆಗದಂತೆ ಒಂದು ನಿಮಿಷವೂ ತಡ ಮಾಡದೆ ನಾಲ್ಕು ಕಡೆಗಳಿಂದ ಹರಿದು ಬರುವ ವಾಹನಗಳನ್ನು ಅತ್ಯಂತ ನಾಜೂಕಿನಿಂದ ನಿಯಂತ್ರಿಸುತ್ತಾರೆ ಸುಳ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಉಳಿದ ಎಲ್ಲಾ ನಗರಗಳಲ್ಲಿಯೂ ಟ್ರಾಫಿಕ್ ಠಾಣೆಗಳಿದ್ದು ಟ್ರಾಫಿಕ್ ಪೊಲೀಸರೇ ವಾಹನ ಸಂಚಾರ ನಿಯಂತ್ರಿಸುತ್ತಾರೆ. ಆದರೆ ಸುಳ್ಯದಲ್ಲಿ ಸಂಚಾರಿ ಪೊಲೀಸ್ ಠಾಣೆ ಇಲ್ಲದ ಕಾರಣ ನಗರದ ಸಂಚಾರಿ ವ್ಯವಸ್ಥೆಯನ್ನು ಸುಳ್ಯ ಪೊಲೀಸ್ ಠಾಣೆಯಿಂದಲೇ ನಿಯಂತ್ರಿಸಲಾಗುತ್ತದೆ. ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳು ಸಂಚಾರಿ ಠಾಣೆಯ ಕೆಲಸವನ್ನು ನಿಭಾಯಿಸುತ್ತಾರೆ‌. ಆದುದರಿಂದಲೇ ಗೃಹರಕ್ಷಕ ದಳ ಸಿಬ್ಬಂದಿಗಳ ಪ್ರತಿನಿಧಿಯಾಗಿ ಹಲವು ವರ್ಷಗಳಿಂದ ಸಮರ್ಥವಾಗಿ ಸಂಚಾರಿ ನಿಯಂತ್ರಣವನ್ನು ನಿರ್ವಹಿಸುವ ಪುಷ್ಪಾವತಿಯವರಿಗೆ ತಾಲೂಕು ಆಡಳಿತ ಗೌರವ ಸಲ್ಲಿಸಿದೆ. ಆದುದರಿಂದ ರಾಜ್ಯೋತ್ಸವ ದಿನದ ಬಿಗ್ ಸಲ್ಯೂಟ್ ನಗರದ ಸಂಚಾರಿ ವ್ಯವಸ್ಥೆಯನ್ನು ನಿಯಂತ್ರಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗಿರಲಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

12 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

12 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

12 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

12 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago