Advertisement
ಸುದ್ದಿಗಳು

ಸಂಚಾರಿ ನಿಯಮವನ್ನ ಸರಿಯಾಗಿ ಪಾಲಿಸದಿದ್ದರೆ ಹೆಚ್ಚಿನ ದಂಡಕ್ಕೆ ಒಳಗಾಗುವಿರಿ :ಬೆಳ್ಳಾರೆ ಠಾಣೆಯಿಂದ ಮಾಹಿತಿ

Share

ಬೆಳ್ಳಾರೆ: ಪೋಲಿಸ್ ಇಲಾಖೆಯು ಸಾರ್ವಜನಿಕರಿಗೆ ಮಹತ್ವದ ಮಾಹಿತಿ  ನೀಡಿದೆ. ಇದನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಇಲಾಖೆಯು ಮಹತ್ವದ ಸಂದೇಶ ಹೊರಡಿಸಿದೆ.
ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದಲ್ಲಿ ಹೊಸ ನಿಯಮಕ್ಕೆ ಅಂದರೆ ಕೇಂದ್ರ ಸರಕಾರ ಹೊಸದಾಗಿ ನಿಗದಿಪಡಿಸಿರುವ ಹೆಚ್ಚು ಮೊತ್ತದ ದಂಡಕ್ಕೆ ಒಳಗಾಗುವಿರಿ ಎಂದು ತಿಳಿಯಪಡಿಸಿದೆ. ಆದುದರಿಂದ ವಾಹನ ಚಾಲನೆ ಮಾಡುವಾಗ ತಮ್ಮ ವಾಹನದ ದಾಖಲೆಗಳು ನಿಯಮಗಳನ್ನು ಪಾಲಿಸಿ ನಡೆಯಿರಿ ಎಂದು ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಈರಯ್ಯ ಡಿ ಎನ್ ತಿಳಿಸಿದ್ದಾರೆ.

ಹೆಲ್ಮೆಟ್ ಇಲ್ಲದೆ ಮೋಟಾರು ಸೈಕಲ್ ಚಲಾವಣೆ ಮಾಡಿದಲ್ಲಿ ಹಿಂದಿನ ಮೊತ್ತ 100 ರೂ ಈಗಿನ ದಂಡ 1000 ರೂಪಾಯಿ ಹಾಗೂ 3 ತಿಂಗಳು ಲೈಸೆನ್ಸ್ ರದ್ದು ,

ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದಲ್ಲಿ ಹಿಂದಿನ ಮೊತ್ತ 100 ರೂ ಈಗಿನ ದಂಡದ ಮೊತ್ತ 1000 ರೂ ,

ಮೊಬೈಲ್ ಉಪಯೋಗಿಸಿ ವಾಹನ ಚಲಾವಣೆ ಮಾಡಿದಲ್ಲಿ ಈ ಹಿಂದಿನ ಮೊತ್ತ 100 ಈಗಿನ ಮೊತ್ತ 1000 ಹಾಗೂ 3 ತಿಂಗಳು ಲೈಸೆನ್ಸ್ ರದ್ದು ,

ಕುಡಿದು ವಾಹನ ಚಲಾವಣೆ ಮಾಡಿದಲ್ಲಿ ಈ ಹಿಂದಿನ ಮೊತ್ತ 2000 ,ಈಗಿನ ದಂಡದ ಮೊತ್ತ 10,000 ,

ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸಿದ್ದಲ್ಲಿ ಈ ಹಿಂದಿನ ಮೊತ್ತ 500 ಈಗಿನ ದಂಡದ ಮೊತ್ತ 5000 ರೂಪಾಯಿ ,

ಅತಿವೇಗದ ವಾಹನ ಚಲಾವಣೆ ಮಾಡಿದಲ್ಲಿ 400 ರೂ ,ಈಗಿನ ದಂಡದ ಮೊತ್ತ ಲಘು ವಾಹನಗಳಿಗೆ 1000 ಘನ ವಾಹನಗಳಿಗೆ 2000 ರೂ ,

ಅಪಾಯಕಾರಿ ವಾಹನ ಚಾಲನೆ ಮಾಡಿದಲ್ಲಿ ಈ ಹಿಂದಿನ ಮೊತ್ತ 1000 ಈಗಿನ ದಂಡದ ಮೊತ್ತ 5000 ರೂ ,

ಪರ್ಮಿಟ್ ಇಲ್ಲದೆ ವಾಹನ ಚಲಾಯಿಸಿದಲ್ಲಿ ಹಿಂದಿನ ಮೊತ್ತ 5000 ರೂ ಈಗಿನ ಮೊತ್ತ 10000 ರೂ ದಂಡ ,

ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನ ಸಾಗಿಸುವುದು ಕಂಡು ಬಂದಲ್ಲಿ ಈ ಹಿಂದಿನ ಮೊತ್ತ 5000 ಈಗಿನ ದಂಡದ ಮೊತ್ತ 1000 ಪ್ರತಿ ಪ್ರಯಾಣಿಕರಿಗೆ ,

ದ್ವಿಚಕ್ರ ವಾಹನದಲ್ಲಿ ಓವರ್ ಲೋಡಿಂಗ್ 100 ರೂ ಈ ಹಿಂದಿನ ಮೊತ್ತ ಈಗಿನ ದಂಡದ ಮೊತ್ತ 2000 ಹಾಗೂ ಲೈಸೆನ್ಸ್ 3 ತಿಂಗಳು ರದ್ದು ,

ವಿಮೆ ಇಲ್ಲದೆ ವಾಹನ ಚಲಾಯಿಸಿ ದಲ್ಲಿ ಈ ಹಿಂದಿನ ದಂಡ 1000 ಈಗಿನ ದಂಡದ ಮೊತ್ತ 2000 ,

ಆಂಬುಲೆನ್ಸ್ ಗೆ ದಾರಿಮಾಡಿ ಕೊಡದಿದ್ದಲ್ಲಿ ಈ ಹಿಂದಿನ ಮೊತ್ತ 1000 ಈಗಿನ ದಂಡದ ಮೊತ್ತ 10000

ಅಪ್ರಾಪ್ತ ರಿಗೆ ವಾಹನ ಚಲಾವಣೆ ಮಾಡಲು ನೀಡಿದರೆ ಈ ಹಿಂದಿನ ದಂಡದ ಮೊತ್ತ 1000 ಆದರೆ ಈಗಿನ ದಂಡದ ಮೊತ್ತದ್ದಂತೆ 25,000 ,3 ವರುಷ ಗಳ ಕಾಲ ಜೈಲು ಶಿಕ್ಷೆ ,ವಾಹನದ ನೊಂದಣಿ ರದ್ದಾಗಲಿರುವುದು.

ಪ್ರಸ್ತುತ ಕೇಂದ್ರ ಸರಕಾರ ವು ಇತ್ತೀಚಿನ ಕೆಲವೊಂದು ಸನ್ನಿವೇಶಗಳು ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿ ಅದಕ್ಕೆ ಸೂಕ್ತವಾಗಿ ಹಿಂದಿನ ದರಕ್ಕಿಂತ ದಂಡವನ್ನು ಹೆಚ್ಚಿಸಿ ಸಾರ್ವಜನಿಕ ರೆಲ್ಲರಿಗೂ ಎಚ್ಚರಿಕೆ ಯ ಸಂದೇಶ ರವಾನಿಸಿದ್ದು ಇಲ್ಲವಾದಲ್ಲಿ ಸಾರ್ವಜನಿಕ ರು ದುಪ್ಪಟ್ಟು ದಂಡಕ್ಕೆ ಒಳಗಾಗಿ ಅದನ್ನ ಯಾವುದೇ ಮುಲಾಜಿಲ್ಲದೆ ಭರಿಸಬೇಕಾದ ಕ್ರಮಕ್ಕೆ ಒಳಗಾಗುತ್ತೀರಿ ಹಾಗಾಗಿ ಮೇಲೆ ತಿಳಿಸಿದ ದಂಡವನ್ನ ಸಾರ್ವಜನಿಕ ರು ಎಚ್ಚರದಿಂದ ಗಮನಿಸಿ, ಇಲಾಖೆ ಹೊರಡಿಸಿದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ , ವಾಹನ ಚಲಾಯಿಸಿರಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

4 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

17 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago