(ಸಾಂದರ್ಭಿಕ ಚಿತ್ರ)
ಬೆಳ್ಳಾರೆ: ಪೋಲಿಸ್ ಇಲಾಖೆಯು ಸಾರ್ವಜನಿಕರಿಗೆ ಮಹತ್ವದ ಮಾಹಿತಿ ನೀಡಿದೆ. ಇದನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಇಲಾಖೆಯು ಮಹತ್ವದ ಸಂದೇಶ ಹೊರಡಿಸಿದೆ.
ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದಲ್ಲಿ ಹೊಸ ನಿಯಮಕ್ಕೆ ಅಂದರೆ ಕೇಂದ್ರ ಸರಕಾರ ಹೊಸದಾಗಿ ನಿಗದಿಪಡಿಸಿರುವ ಹೆಚ್ಚು ಮೊತ್ತದ ದಂಡಕ್ಕೆ ಒಳಗಾಗುವಿರಿ ಎಂದು ತಿಳಿಯಪಡಿಸಿದೆ. ಆದುದರಿಂದ ವಾಹನ ಚಾಲನೆ ಮಾಡುವಾಗ ತಮ್ಮ ವಾಹನದ ದಾಖಲೆಗಳು ನಿಯಮಗಳನ್ನು ಪಾಲಿಸಿ ನಡೆಯಿರಿ ಎಂದು ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಈರಯ್ಯ ಡಿ ಎನ್ ತಿಳಿಸಿದ್ದಾರೆ.
ಹೆಲ್ಮೆಟ್ ಇಲ್ಲದೆ ಮೋಟಾರು ಸೈಕಲ್ ಚಲಾವಣೆ ಮಾಡಿದಲ್ಲಿ ಹಿಂದಿನ ಮೊತ್ತ 100 ರೂ ಈಗಿನ ದಂಡ 1000 ರೂಪಾಯಿ ಹಾಗೂ 3 ತಿಂಗಳು ಲೈಸೆನ್ಸ್ ರದ್ದು ,
ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದಲ್ಲಿ ಹಿಂದಿನ ಮೊತ್ತ 100 ರೂ ಈಗಿನ ದಂಡದ ಮೊತ್ತ 1000 ರೂ ,
ಮೊಬೈಲ್ ಉಪಯೋಗಿಸಿ ವಾಹನ ಚಲಾವಣೆ ಮಾಡಿದಲ್ಲಿ ಈ ಹಿಂದಿನ ಮೊತ್ತ 100 ಈಗಿನ ಮೊತ್ತ 1000 ಹಾಗೂ 3 ತಿಂಗಳು ಲೈಸೆನ್ಸ್ ರದ್ದು ,
ಕುಡಿದು ವಾಹನ ಚಲಾವಣೆ ಮಾಡಿದಲ್ಲಿ ಈ ಹಿಂದಿನ ಮೊತ್ತ 2000 ,ಈಗಿನ ದಂಡದ ಮೊತ್ತ 10,000 ,
ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸಿದ್ದಲ್ಲಿ ಈ ಹಿಂದಿನ ಮೊತ್ತ 500 ಈಗಿನ ದಂಡದ ಮೊತ್ತ 5000 ರೂಪಾಯಿ ,
ಅತಿವೇಗದ ವಾಹನ ಚಲಾವಣೆ ಮಾಡಿದಲ್ಲಿ 400 ರೂ ,ಈಗಿನ ದಂಡದ ಮೊತ್ತ ಲಘು ವಾಹನಗಳಿಗೆ 1000 ಘನ ವಾಹನಗಳಿಗೆ 2000 ರೂ ,
ಅಪಾಯಕಾರಿ ವಾಹನ ಚಾಲನೆ ಮಾಡಿದಲ್ಲಿ ಈ ಹಿಂದಿನ ಮೊತ್ತ 1000 ಈಗಿನ ದಂಡದ ಮೊತ್ತ 5000 ರೂ ,
ಪರ್ಮಿಟ್ ಇಲ್ಲದೆ ವಾಹನ ಚಲಾಯಿಸಿದಲ್ಲಿ ಹಿಂದಿನ ಮೊತ್ತ 5000 ರೂ ಈಗಿನ ಮೊತ್ತ 10000 ರೂ ದಂಡ ,
ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನ ಸಾಗಿಸುವುದು ಕಂಡು ಬಂದಲ್ಲಿ ಈ ಹಿಂದಿನ ಮೊತ್ತ 5000 ಈಗಿನ ದಂಡದ ಮೊತ್ತ 1000 ಪ್ರತಿ ಪ್ರಯಾಣಿಕರಿಗೆ ,
ದ್ವಿಚಕ್ರ ವಾಹನದಲ್ಲಿ ಓವರ್ ಲೋಡಿಂಗ್ 100 ರೂ ಈ ಹಿಂದಿನ ಮೊತ್ತ ಈಗಿನ ದಂಡದ ಮೊತ್ತ 2000 ಹಾಗೂ ಲೈಸೆನ್ಸ್ 3 ತಿಂಗಳು ರದ್ದು ,
ವಿಮೆ ಇಲ್ಲದೆ ವಾಹನ ಚಲಾಯಿಸಿ ದಲ್ಲಿ ಈ ಹಿಂದಿನ ದಂಡ 1000 ಈಗಿನ ದಂಡದ ಮೊತ್ತ 2000 ,
ಆಂಬುಲೆನ್ಸ್ ಗೆ ದಾರಿಮಾಡಿ ಕೊಡದಿದ್ದಲ್ಲಿ ಈ ಹಿಂದಿನ ಮೊತ್ತ 1000 ಈಗಿನ ದಂಡದ ಮೊತ್ತ 10000
ಅಪ್ರಾಪ್ತ ರಿಗೆ ವಾಹನ ಚಲಾವಣೆ ಮಾಡಲು ನೀಡಿದರೆ ಈ ಹಿಂದಿನ ದಂಡದ ಮೊತ್ತ 1000 ಆದರೆ ಈಗಿನ ದಂಡದ ಮೊತ್ತದ್ದಂತೆ 25,000 ,3 ವರುಷ ಗಳ ಕಾಲ ಜೈಲು ಶಿಕ್ಷೆ ,ವಾಹನದ ನೊಂದಣಿ ರದ್ದಾಗಲಿರುವುದು.
ಪ್ರಸ್ತುತ ಕೇಂದ್ರ ಸರಕಾರ ವು ಇತ್ತೀಚಿನ ಕೆಲವೊಂದು ಸನ್ನಿವೇಶಗಳು ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿ ಅದಕ್ಕೆ ಸೂಕ್ತವಾಗಿ ಹಿಂದಿನ ದರಕ್ಕಿಂತ ದಂಡವನ್ನು ಹೆಚ್ಚಿಸಿ ಸಾರ್ವಜನಿಕ ರೆಲ್ಲರಿಗೂ ಎಚ್ಚರಿಕೆ ಯ ಸಂದೇಶ ರವಾನಿಸಿದ್ದು ಇಲ್ಲವಾದಲ್ಲಿ ಸಾರ್ವಜನಿಕ ರು ದುಪ್ಪಟ್ಟು ದಂಡಕ್ಕೆ ಒಳಗಾಗಿ ಅದನ್ನ ಯಾವುದೇ ಮುಲಾಜಿಲ್ಲದೆ ಭರಿಸಬೇಕಾದ ಕ್ರಮಕ್ಕೆ ಒಳಗಾಗುತ್ತೀರಿ ಹಾಗಾಗಿ ಮೇಲೆ ತಿಳಿಸಿದ ದಂಡವನ್ನ ಸಾರ್ವಜನಿಕ ರು ಎಚ್ಚರದಿಂದ ಗಮನಿಸಿ, ಇಲಾಖೆ ಹೊರಡಿಸಿದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ , ವಾಹನ ಚಲಾಯಿಸಿರಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಮಾಹಿತಿ ನೀಡಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…