ಸಂತ್ರಸ್ತರ ಸಾಲಮನ್ನಾಕ್ಕೆ ಕೊಡಗು ಕಾಂಗ್ರೆಸ್‍ನಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಮನವಿ

August 28, 2019
3:00 PM

ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror