ಸುದ್ದಿಗಳು

ಸಂತ್ರಸ್ತರ ಸಾಲಮನ್ನಾಕ್ಕೆ ಕೊಡಗು ಕಾಂಗ್ರೆಸ್‍ನಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಮನವಿ

Share

ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

Advertisement

ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

7 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago