ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…