ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…