ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…