ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…