Advertisement
ರಾಜ್ಯ

ಸಂತ್ರಸ್ತ ಗೋವುಗಳಿಗೆ ರಾಮಚಂದ್ರಾಪುರ ಮಠದ ಗೋಶಾಲೆಗಳಲ್ಲಿ ಉಚಿತ ಪಾಲನೆ

Share

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.

ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.

ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago