Advertisement
ರಾಜ್ಯ

ಸಂತ್ರಸ್ತ ಗೋವುಗಳಿಗೆ ರಾಮಚಂದ್ರಾಪುರ ಮಠದ ಗೋಶಾಲೆಗಳಲ್ಲಿ ಉಚಿತ ಪಾಲನೆ

Share

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.

Advertisement

ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.

Advertisement

ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

13 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

13 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

14 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

14 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

17 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

22 hours ago