Advertisement
ರಾಜ್ಯ

ಸಂತ್ರಸ್ತ ಗೋವುಗಳಿಗೆ ರಾಮಚಂದ್ರಾಪುರ ಮಠದ ಗೋಶಾಲೆಗಳಲ್ಲಿ ಉಚಿತ ಪಾಲನೆ

Share

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.

ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.

ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

6 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

12 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

13 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

14 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

15 hours ago