ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಗೋವುಗಳ ಉಚಿತ ರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ, ನೆರಿಯ, ಕಕ್ಕಿಂಜೆ, ಮುಂಡಾಜೆ, ಚಾರ್ಮಾಡಿ ಮತ್ತಿತರ ಕಡೆಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೂರಾರು ಕುಟುಂಬಗಳ ಬದುಕು ಬೀದಿಗೆ ಬಂದಿದ್ದು, ಅವರು ಸಾಕುತ್ತಿದ್ದ ಗೋವುಗಳು ದಯನೀಯ ಸ್ಥಿತಿಯಲ್ಲಿರುವುದನ್ನು ಮನಗಂಡು ಶ್ರೀರಾಮಚಂದ್ರಾಪುರ ಮಠ ಈ ಘೋಷಣೆ ಮಾಡಿದೆ.
ಈ ಪ್ರದೇಶದಲ್ಲಿ ಬಹಳಷ್ಟು ಮಂದಿ ಪ್ರೀತಿಯಿಂದ ಸಾಕಿದ ಗೋವುಗಳ ಮಾರಾಟಕ್ಕೆ ಮುಂದಾಗಿದ್ದು, ಯಾರೂ ಗೋವುಗಳನ್ನು ಮಾರಾಟ ಮಾಡದಂತೆ ಶ್ರೀಮಠ ಮನವಿ ಮಾಡಿದೆ. ಗೋವುಗಳನ್ನು ಸಾಕಲಾಗದಿದ್ದರೆ, ಶ್ರೀಮಠದ ಗೋಶಾಲೆಗಳಿಗೆ ನೀಡಿದಲ್ಲಿ ಉಚಿತವಾಗಿ ಅವುಗಳನ್ನು ಸಾಕಲಾಗುತ್ತದೆ. ರೈತರು ಪರಿಸ್ಥಿತಿ ಸುಧಾರಿಸಿದ ಬಳಿಕ ತಮ್ಮ ಗೋವುಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಶ್ರೀಮಠದ ಕಾಮದುಘಾ ಮತ್ತು ಗೋ ಪರಿವಾರ ವತಿಯಿಂದ ಸಂತ್ರಸ್ತ ಪ್ರದೇಶಗಳ ಗೋವುಗಳಿಗೆ ರಕ್ಷಣೆ ನೀಡಲಾಗಿದೆ. ಹಲವಾರು ಕಡೆಗಳಲ್ಲಿ ಗೋವುಗಳಿಗೆ ದಾಸ್ತಾನು ಮಾಡಿದ್ದ ಮೇವು ನೀರುಪಾಲಾಗಿರುವ ಹಿನ್ನೆಲೆಯಲ್ಲಿ ಮೇವು ಇರುವ ಕಡೆಗಳಿಂದ ಖರೀದಿಸಿ ಬಾಗಲಕೋಟೆ ಜಿಲ್ಲೆ ಶಿವಯೋಗ ಮಂದಿರದ ಗೋಶಾಲೆ, ಹಾನಗಲ್ ಗೋಶಾಲೆಗಳಿಗೆ ಮತ್ತು ಚಾರ್ಮಾಡಿ ಪ್ರದೇಶಗಳಲ್ಲಿ ಸಂತ್ರಸ್ತ ಜನರು ಸಾಕುತ್ತಿದ್ದ ಗೋವುಗಳಿಗೆ ಪೂರೈಕೆ ಮಾಡಲಾಗಿದೆ. ಇದರ ಜತೆಗೆ ಶ್ರೀಮಠದ ನೂರಾರು ಸೇವಾಬಿಂದುಗಳು ಶ್ರಮದಾನದ ಮೂಲಕ ಸಂತ್ರಸ್ತರ ಬದುಕು ಕಟ್ಟುವ ಮಾನವೀಯ ಕಾರ್ಯದಲ್ಲಿ ನೆರವಾಗಿದ್ದಾರೆ.
ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ಹಾಗೂ ಶಾಖಾಮಠಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರವನ್ನು ಆರಂಭಿಸಿ ಸಂತ್ರಸ್ತರಿಗೆ ವಿತರಿಸುವ ಕಾರ್ಯವೂ ಭರದಿಂದ ಸಾಗಿದೆ. ನೆರವು ಅಗತ್ಯವಿರುವ ರೈತರು ವೇಣೂರು ಪರಮೇಶ್ವರ ಭಟ್ (9008167013) ಅವರನ್ನು ಸಂಪರ್ಕಿಸಬಹುದು.
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…