ನಮ್ಮೂರ ಸುದ್ದಿ

ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ನೆನಪಲ್ಲಿ ರಕ್ತದಾನ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ  ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.

Advertisement

ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ  ಶಿವಕುಮಾರ್,  ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.

ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್  ಶುಭಕೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

1 hour ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

2 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

2 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

2 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

16 hours ago