ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ ಶಿವಕುಮಾರ್, ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.
ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್ ಶುಭಕೋರಿದರು.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…