Advertisement
ನಮ್ಮೂರ ಸುದ್ದಿ

ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ನೆನಪಲ್ಲಿ ರಕ್ತದಾನ ಶಿಬಿರ

Share

ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ  ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ  ಶಿವಕುಮಾರ್,  ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.

ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್  ಶುಭಕೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

3 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

4 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

5 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

6 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago