Advertisement
ನಮ್ಮೂರ ಸುದ್ದಿ

ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ನೆನಪಲ್ಲಿ ರಕ್ತದಾನ ಶಿಬಿರ

Share

ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ  ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ  ಶಿವಕುಮಾರ್,  ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.

ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್  ಶುಭಕೋರಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

12 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

20 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago