ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ ಶಿವಕುಮಾರ್, ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.
ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್ ಶುಭಕೋರಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…