Advertisement
ನಮ್ಮೂರ ಸುದ್ದಿ

ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ನೆನಪಲ್ಲಿ ರಕ್ತದಾನ ಶಿಬಿರ

Share

ಸಂಪಾಜೆ : ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಸಂಪಾಜೆಯ ಅಭಿವೃದ್ಧಿಗಾಗಿ ದುಡಿದ  ದಿ. ಬಾಲಚಂದ್ರ ಕಳಗಿಯವರ ನೆನಪಲ್ಲಿ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಶನಿವಾರ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಜಿ.ಕೆ.ಸುಬ್ರಮಣ್ಯ ಭಟ್ , ಮಡಿಕೇರಿ ಜಿಲ್ಲಾ ಆರೋಗ್ಯ ಕೇಂದ್ರದ ತಾಲೂಕು ಅಧಿಕಾರಿಗಳಾದ ಡಾ. ಶಿವಕುಮಾರ್, ಡಾ. ಕರಂಬಯ್ಯ, ರಕ್ತ ನಿಧಿ ಘಟಕ, ವೈದ್ಯಕೀಯ ಕಾಲೇಜು ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನುತ್ ಹೆಚ್.ಎಸ್, ಉದ್ಭವ ಟ್ರಸ್ಟ್ ನ ವ್ಯವಸ್ಥಾಪಕರಾದ  ಶಿವಕುಮಾರ್,  ಸಂಪಾಜೆ ಬಿ.ಜೆ.ಪಿ ಸ್ಥಾನೀಯ ಅಧ್ಯಕ್ಷರಾದ ಮಾಯಿಲಪ್ಪ ಮೂಲ್ಯ, ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಗ್ರಾಮ ಪಂಚಾಯತ್ ಸದಸ್ಯರಾದ ಕಳಗಿಯವರ ಪತ್ನಿ ರಮಾದೇವಿ, ರಾಜಾರಾಮ್ ಕಳಗಿ, ನಳಿನಿ ರಾಜಾರಾಮ್ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಂದರ್ ಬಿಸಲುಮನೆ, ಸಂಪಾಜೆ ಪಯಸ್ವಿನಿ ಬ್ಯಾಂಕಿನ ಉಪಾಧ್ಯಕ್ಷರಾದ ದಯಾನಂದ ಪನೇಡ್ಕ, ನಿರ್ದೇಶಕರಾದ ರಮಾನಂದ ಬಾಳಕಜೆ ಮತ್ತು ತೀರ್ಥಪ್ರಸಾದ್ ಕೋಲ್ಚಾರ್, ಚೆಂಬು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ, ವಿಶ್ವ ಹಿಂದೂ ಪರಿಷತ್ ಚೆಂಬು ಘಟಕದ ಸಂಚಾಲಕ ವಿಜಯ್ ನಿಡಿಂಜಿ ಭಾಗವಹಿಸಿದ್ದರು.

ಸ್ವಾಗತ ಭಾಷಣವನ್ನು ಪುರುಷೋತ್ತಮ ಬಾಳೆಹಿತ್ಲು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮೌನಾಚಾರಣೆಯನ್ನು ಮಾಡುವ ಮೂಲಕ ಅಭಿಮಾನಿಗಳು ಮತ್ತು ಬಂಧು ಮಿತ್ರರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಅನೇಕರು ರಕ್ತದಾನ ಮಾಡಿದರು. ಕಾರ್ಯಕ್ರಮಕ್ಕೆ ಕೊಡಗು ಬಿ.ಜೆ.ಪಿ ಜಿಲ್ಲಾಧ್ಯಕ್ಷರು ಭಾರತೀಶ್  ಶುಭಕೋರಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago