ಸುದ್ದಿಗಳು

ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವು ನ. 24 ರಂದು ಸಂಪಾಜೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

Advertisement

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತೇಶ್ವರ ಎನ್.ಸಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖೆಯ ಚೆಸ್ಕ್ ಕಿರಿಯ ಎಂಜಿನಿಯರ್ ಅನಿಲ್ ಕುಮಾರ್ ಕೆ.ಜಿ., ಸಂಪಾಜೆ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ಚರಣ್, ಎಪಿಎಂಸಿ ಸದಸ್ಯ ದೇವಪ್ಪ, ಸಂಪಾಜೆ ಗ್ರಾ. ಪಂ. ಸದಸ್ಯೆ ಗಿರಿಜಾ ಮೋಹನ್, ವರ್ತಕರಾದ ಇಸ್ಮಾಯಿಲ್ ಪಿ.ಕೆ., ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಚರಣ್ ಬಿ.ಜೆ., ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಪಡ್ಪು ಉಪಸ್ಥಿತರಿದ್ದರು.

ಅಪರಾಹ್ನ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಿತು. ನೇತಾಜಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಪಿಎಲ್ ಸುರೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಕುಮಾರ್ ಚಿದ್ಕಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೊಯಿದೀನ್ ಕುಂಞಿ ಎಸ್., ನೇತಾಜಿ ಗೆಳೆಯರ ಬಳಗದ ಸದಸ್ಯ ಉಮೇಶ್ ನಿಡುಬೆ ಉಪಸ್ಥಿತರಿದ್ದರು.

ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ವಾಸು ಕೊಯನಾಡು ಅವರು ಬಹುಮಾನ ವಿತರಿಸಿದರು. ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಎಚ್. ಬಿ. ಉಪಸ್ಥಿತರಿದ್ದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೆಲೆಸ್ಟಿನಾ ಲೋಬೊ ಅವರನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಕುಮಾರಿ ಚೆಡಾವು ಅವರು ಸನ್ಮಾನಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

7 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

22 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

23 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

23 hours ago