ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವು ನ. 24 ರಂದು ಸಂಪಾಜೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತೇಶ್ವರ ಎನ್.ಸಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖೆಯ ಚೆಸ್ಕ್ ಕಿರಿಯ ಎಂಜಿನಿಯರ್ ಅನಿಲ್ ಕುಮಾರ್ ಕೆ.ಜಿ., ಸಂಪಾಜೆ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ಚರಣ್, ಎಪಿಎಂಸಿ ಸದಸ್ಯ ದೇವಪ್ಪ, ಸಂಪಾಜೆ ಗ್ರಾ. ಪಂ. ಸದಸ್ಯೆ ಗಿರಿಜಾ ಮೋಹನ್, ವರ್ತಕರಾದ ಇಸ್ಮಾಯಿಲ್ ಪಿ.ಕೆ., ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಚರಣ್ ಬಿ.ಜೆ., ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಪಡ್ಪು ಉಪಸ್ಥಿತರಿದ್ದರು.
ಅಪರಾಹ್ನ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಿತು. ನೇತಾಜಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಪಿಎಲ್ ಸುರೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಕುಮಾರ್ ಚಿದ್ಕಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೊಯಿದೀನ್ ಕುಂಞಿ ಎಸ್., ನೇತಾಜಿ ಗೆಳೆಯರ ಬಳಗದ ಸದಸ್ಯ ಉಮೇಶ್ ನಿಡುಬೆ ಉಪಸ್ಥಿತರಿದ್ದರು.
ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ವಾಸು ಕೊಯನಾಡು ಅವರು ಬಹುಮಾನ ವಿತರಿಸಿದರು. ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಎಚ್. ಬಿ. ಉಪಸ್ಥಿತರಿದ್ದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೆಲೆಸ್ಟಿನಾ ಲೋಬೊ ಅವರನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಕುಮಾರಿ ಚೆಡಾವು ಅವರು ಸನ್ಮಾನಿಸಿದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…