Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

Share

ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವು ನ. 24 ರಂದು ಸಂಪಾಜೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತೇಶ್ವರ ಎನ್.ಸಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖೆಯ ಚೆಸ್ಕ್ ಕಿರಿಯ ಎಂಜಿನಿಯರ್ ಅನಿಲ್ ಕುಮಾರ್ ಕೆ.ಜಿ., ಸಂಪಾಜೆ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ಚರಣ್, ಎಪಿಎಂಸಿ ಸದಸ್ಯ ದೇವಪ್ಪ, ಸಂಪಾಜೆ ಗ್ರಾ. ಪಂ. ಸದಸ್ಯೆ ಗಿರಿಜಾ ಮೋಹನ್, ವರ್ತಕರಾದ ಇಸ್ಮಾಯಿಲ್ ಪಿ.ಕೆ., ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಚರಣ್ ಬಿ.ಜೆ., ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಪಡ್ಪು ಉಪಸ್ಥಿತರಿದ್ದರು.

ಅಪರಾಹ್ನ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಿತು. ನೇತಾಜಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಪಿಎಲ್ ಸುರೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಕುಮಾರ್ ಚಿದ್ಕಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೊಯಿದೀನ್ ಕುಂಞಿ ಎಸ್., ನೇತಾಜಿ ಗೆಳೆಯರ ಬಳಗದ ಸದಸ್ಯ ಉಮೇಶ್ ನಿಡುಬೆ ಉಪಸ್ಥಿತರಿದ್ದರು.

ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ವಾಸು ಕೊಯನಾಡು ಅವರು ಬಹುಮಾನ ವಿತರಿಸಿದರು. ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಎಚ್. ಬಿ. ಉಪಸ್ಥಿತರಿದ್ದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೆಲೆಸ್ಟಿನಾ ಲೋಬೊ ಅವರನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಕುಮಾರಿ ಚೆಡಾವು ಅವರು ಸನ್ಮಾನಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

31 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago