ಸುಳ್ಯ: ಕೊಡಗು ಸಂಪಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು.
ಕಸಾಪ ಸಂಪಾಜೆ ಘಟಕ ಅಧ್ಯಕ್ಷ ಅನಂತ ಊರುಬೈಲು, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ಸಾಹಿತಿ ಲೈನ್ಕಜೆ ರಾಮಚಂದ್ರ ಭಟ್, ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ, ಕಸಾಪ ಕಾರ್ಯದರ್ಶಿ ಬಿ.ಜೆ ಯಶೋಧರ, ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಹೊನ್ನಪ್ಪ ಕಾಸ್ಪಾಡಿ, ಕಸಾಪ ಪದಾಧಿಕಾರಿಗಳಾದ ರವಿರಾಜ್ ಹೊಸೂರು, ಅಮೃತರಾಜ್ ಕುಯಿಂತೋಡು, ಶಭರೀಶ್ ಕುದ್ಕುಳಿ, ಶಾಲಾ ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳ ಪೋಷಕರು, ಶಾಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕನ್ನಡದ ರಾಜ್ಯೋತ್ಸವದ ಮಹತ್ವದ ಬಗ್ಗೆ ಕಿರುಭಾಷಣ ಮತ್ತು ಕನ್ನಡ ಗೀತೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಲೈನ್ಕಜೆ ರಾಮಚಂದ್ರ ಭಟ್ ಶಾಲಾ ಮಕ್ಕಳಿಗೆ ಕನ್ನಡ ಭಾಷಾ ಮಹತ್ವವನ್ನು ತಿಳಿಸಿ ಕನ್ನಡ ಸಾಹಿತ್ಯದ ಪುಸ್ತಕವನ್ನು ನೀಡಿದರು. ಶಿಕ್ಷಕ ಚೇತನ್ ಸ್ವಾಗತಿಸಿ, ವಂದಿಸಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…