ಸುಳ್ಯ: ಕೊಡಗು ಸಂಪಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು.
ಕಸಾಪ ಸಂಪಾಜೆ ಘಟಕ ಅಧ್ಯಕ್ಷ ಅನಂತ ಊರುಬೈಲು, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ಸಾಹಿತಿ ಲೈನ್ಕಜೆ ರಾಮಚಂದ್ರ ಭಟ್, ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ, ಕಸಾಪ ಕಾರ್ಯದರ್ಶಿ ಬಿ.ಜೆ ಯಶೋಧರ, ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಹೊನ್ನಪ್ಪ ಕಾಸ್ಪಾಡಿ, ಕಸಾಪ ಪದಾಧಿಕಾರಿಗಳಾದ ರವಿರಾಜ್ ಹೊಸೂರು, ಅಮೃತರಾಜ್ ಕುಯಿಂತೋಡು, ಶಭರೀಶ್ ಕುದ್ಕುಳಿ, ಶಾಲಾ ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳ ಪೋಷಕರು, ಶಾಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕನ್ನಡದ ರಾಜ್ಯೋತ್ಸವದ ಮಹತ್ವದ ಬಗ್ಗೆ ಕಿರುಭಾಷಣ ಮತ್ತು ಕನ್ನಡ ಗೀತೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಲೈನ್ಕಜೆ ರಾಮಚಂದ್ರ ಭಟ್ ಶಾಲಾ ಮಕ್ಕಳಿಗೆ ಕನ್ನಡ ಭಾಷಾ ಮಹತ್ವವನ್ನು ತಿಳಿಸಿ ಕನ್ನಡ ಸಾಹಿತ್ಯದ ಪುಸ್ತಕವನ್ನು ನೀಡಿದರು. ಶಿಕ್ಷಕ ಚೇತನ್ ಸ್ವಾಗತಿಸಿ, ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…