ಸುದ್ದಿಗಳು

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಸಭೆ ಸಮಾರಂಭಗಳ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆಯುವವರ ಮೇಲೆ ದಂಡನೆ ವಿಧಿಸಲು ನರ್ಧರಿಸಲಾಯಿತು. ಬಂಟೋಡಿ ಮುಳ್ಳುಕುಂಜ ಗುಂಪು ಮನೆಗಳಿಗೆ ಕುಡಿಯುವ ನೀರಿನ ಹೊಸ ಬೋರ್‌ವೆಲ್ ವ್ಯವಸ್ಥೆಗೆ, ಸಾರ್ವಜನಿಕ ಕುಡಿಯುವ ನೀರಿನ ಬಾವಿಗಳಾದ ದಂಡೆಕಜೆ, ಕೀಲಾರುಮೂಲೆ, ಕಲ್ಲುಗುಂಡಿ, ಪೇರಡ್ಕ, ದರ್ಖಾಸ್ತು ಬಾವಿಗಳ ಹೂಳೆತ್ತಲು ಜಿಲ್ಲಾ ಪಂಚಾಯತ್‌ಗೆ ಬರೆಯಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಅಲೆಮಾರಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರು ಅವರವರ ದನಗಳನ್ನು ಸಾರ್ವಜನಿಕ ಸ್ಥಳಗಳಿಗೆ ರಸ್ತೆಗಳಿಗೆ ಬಿಡುವಂತಿಲ್ಲ. ದನಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲು ಸೂಚನೆ ನೀಡಲು ನಿರ್ಧರಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗೆ ದನಗಳು ಬಂದು ಅಪಾಯ ಸಂಭವಿಸುವುದರಿಂದ ಅಂತಹ ದನಗಳನ್ನು ಹಿಡಿದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. 2018-19 ನೇ ಸಾಲಿನಲ್ಲಿ 20 ಮನೆಗಳು ಮಂಜೂರಾಗಿದ್ದು, ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿರುವುದಿಲ್ಲ. ಹಾಗೂ ಹೊಸ ಮನೆ ಇವರಿಗೆ ಬಂದಿಲ್ಲ, ಬಡವರಿಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗುತ್ತಿಲ್ಲ, ಈ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರಿಗೆ ತಿಳಿಸಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಬಾರದ ರೀತಿಯಲ್ಲಿ ವ್ಯಾಪಾರ ಮಾಡುವಂತೆ ತಿಳುವಳಿಕೆ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾಮ ಪಂಚಾಯತ್‌ನ ಮನೆತೆರಿಗೆ, ವ್ಯಾಪಾರ ಪರವಾನಿಗೆ, ಸ್ವಚ್ಚತಾ ಕರ, ನೀರಿನ ಕರ, ಕಟ್ಟುನಿಟ್ಟಾಗಿ ವಸೂಲಿ ಮಾಡುವುದು, ಈ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಬೀದಿಗಳಲ್ಲಿ ಕಸ ಎಸೆಯುವ ಬಗ್ಗೆ ದ್ವನಿವರ್ಧಕದ ಮೂಲಕ ಪ್ರಚಾರಪಡಿಸುವುದು ಎಂದು ತೀರ್ಮಾನಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಜಲಾಮೃತ ಯೋಜನೆಯಡಿ ಆಯ್ಕೆಯಾಗಿದ್ದು ಈ ಯೋಜನೆಯಡಿ ಕೃಷಿಕರಿಗೆ ತಡೆಗೋಡೆ, ಕಿಂಡಿ ಅಣೆಕಟ್ಟು ಇನ್ನಿತರ ಯೋಜನೆ ಜಾರಿಯಲ್ಲಿದ್ದು, ಕೃಷಿ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಸಭೆಯಲ್ಲಿ ಸೂಚಿಸಲಾಯಿತು.
ಈ ಸಭೆಯಲ್ಲಿ ಸದಸ್ಯರಾದ ಯಶೋದ ಕೆ.ಕೆ, ಆಶಾ ಎಂ.ಕೆ, ಲೆತಿಶ್ಯಾ ಡಿಸೋಜ, ಹಮೀದ್ ಜಿ.ಕೆ, ಸೋಮಶೇಖರ್ ಕೊಯಿಂಗಾಜೆ, ಅಬುಶಾಲಿ ಪಿ.ಕೆ, ನಾಗೇಶ್ ಪಿ.ಆರ್, ಷಣ್ಮುಗಂ ಎಸ್. ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

16 minutes ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

39 minutes ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

8 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

9 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

9 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

9 hours ago