Advertisement
ಸುದ್ದಿಗಳು

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

Share

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಸಭೆ ಸಮಾರಂಭಗಳ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆಯುವವರ ಮೇಲೆ ದಂಡನೆ ವಿಧಿಸಲು ನರ್ಧರಿಸಲಾಯಿತು. ಬಂಟೋಡಿ ಮುಳ್ಳುಕುಂಜ ಗುಂಪು ಮನೆಗಳಿಗೆ ಕುಡಿಯುವ ನೀರಿನ ಹೊಸ ಬೋರ್‌ವೆಲ್ ವ್ಯವಸ್ಥೆಗೆ, ಸಾರ್ವಜನಿಕ ಕುಡಿಯುವ ನೀರಿನ ಬಾವಿಗಳಾದ ದಂಡೆಕಜೆ, ಕೀಲಾರುಮೂಲೆ, ಕಲ್ಲುಗುಂಡಿ, ಪೇರಡ್ಕ, ದರ್ಖಾಸ್ತು ಬಾವಿಗಳ ಹೂಳೆತ್ತಲು ಜಿಲ್ಲಾ ಪಂಚಾಯತ್‌ಗೆ ಬರೆಯಲು ನಿರ್ಧರಿಸಲಾಯಿತು.

Advertisement

ಸಾರ್ವಜನಿಕ ಸ್ಥಳಗಳಲ್ಲಿ ಅಲೆಮಾರಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರು ಅವರವರ ದನಗಳನ್ನು ಸಾರ್ವಜನಿಕ ಸ್ಥಳಗಳಿಗೆ ರಸ್ತೆಗಳಿಗೆ ಬಿಡುವಂತಿಲ್ಲ. ದನಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲು ಸೂಚನೆ ನೀಡಲು ನಿರ್ಧರಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗೆ ದನಗಳು ಬಂದು ಅಪಾಯ ಸಂಭವಿಸುವುದರಿಂದ ಅಂತಹ ದನಗಳನ್ನು ಹಿಡಿದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. 2018-19 ನೇ ಸಾಲಿನಲ್ಲಿ 20 ಮನೆಗಳು ಮಂಜೂರಾಗಿದ್ದು, ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿರುವುದಿಲ್ಲ. ಹಾಗೂ ಹೊಸ ಮನೆ ಇವರಿಗೆ ಬಂದಿಲ್ಲ, ಬಡವರಿಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗುತ್ತಿಲ್ಲ, ಈ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರಿಗೆ ತಿಳಿಸಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಬಾರದ ರೀತಿಯಲ್ಲಿ ವ್ಯಾಪಾರ ಮಾಡುವಂತೆ ತಿಳುವಳಿಕೆ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾಮ ಪಂಚಾಯತ್‌ನ ಮನೆತೆರಿಗೆ, ವ್ಯಾಪಾರ ಪರವಾನಿಗೆ, ಸ್ವಚ್ಚತಾ ಕರ, ನೀರಿನ ಕರ, ಕಟ್ಟುನಿಟ್ಟಾಗಿ ವಸೂಲಿ ಮಾಡುವುದು, ಈ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಬೀದಿಗಳಲ್ಲಿ ಕಸ ಎಸೆಯುವ ಬಗ್ಗೆ ದ್ವನಿವರ್ಧಕದ ಮೂಲಕ ಪ್ರಚಾರಪಡಿಸುವುದು ಎಂದು ತೀರ್ಮಾನಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಜಲಾಮೃತ ಯೋಜನೆಯಡಿ ಆಯ್ಕೆಯಾಗಿದ್ದು ಈ ಯೋಜನೆಯಡಿ ಕೃಷಿಕರಿಗೆ ತಡೆಗೋಡೆ, ಕಿಂಡಿ ಅಣೆಕಟ್ಟು ಇನ್ನಿತರ ಯೋಜನೆ ಜಾರಿಯಲ್ಲಿದ್ದು, ಕೃಷಿ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಸಭೆಯಲ್ಲಿ ಸೂಚಿಸಲಾಯಿತು.
ಈ ಸಭೆಯಲ್ಲಿ ಸದಸ್ಯರಾದ ಯಶೋದ ಕೆ.ಕೆ, ಆಶಾ ಎಂ.ಕೆ, ಲೆತಿಶ್ಯಾ ಡಿಸೋಜ, ಹಮೀದ್ ಜಿ.ಕೆ, ಸೋಮಶೇಖರ್ ಕೊಯಿಂಗಾಜೆ, ಅಬುಶಾಲಿ ಪಿ.ಕೆ, ನಾಗೇಶ್ ಪಿ.ಆರ್, ಷಣ್ಮುಗಂ ಎಸ್. ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

5 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

8 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

8 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

16 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

17 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

18 hours ago