Advertisement
ಸುದ್ದಿಗಳು

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

Share

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಸಭೆ ಸಮಾರಂಭಗಳ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆಯುವವರ ಮೇಲೆ ದಂಡನೆ ವಿಧಿಸಲು ನರ್ಧರಿಸಲಾಯಿತು. ಬಂಟೋಡಿ ಮುಳ್ಳುಕುಂಜ ಗುಂಪು ಮನೆಗಳಿಗೆ ಕುಡಿಯುವ ನೀರಿನ ಹೊಸ ಬೋರ್‌ವೆಲ್ ವ್ಯವಸ್ಥೆಗೆ, ಸಾರ್ವಜನಿಕ ಕುಡಿಯುವ ನೀರಿನ ಬಾವಿಗಳಾದ ದಂಡೆಕಜೆ, ಕೀಲಾರುಮೂಲೆ, ಕಲ್ಲುಗುಂಡಿ, ಪೇರಡ್ಕ, ದರ್ಖಾಸ್ತು ಬಾವಿಗಳ ಹೂಳೆತ್ತಲು ಜಿಲ್ಲಾ ಪಂಚಾಯತ್‌ಗೆ ಬರೆಯಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಅಲೆಮಾರಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರು ಅವರವರ ದನಗಳನ್ನು ಸಾರ್ವಜನಿಕ ಸ್ಥಳಗಳಿಗೆ ರಸ್ತೆಗಳಿಗೆ ಬಿಡುವಂತಿಲ್ಲ. ದನಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲು ಸೂಚನೆ ನೀಡಲು ನಿರ್ಧರಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗೆ ದನಗಳು ಬಂದು ಅಪಾಯ ಸಂಭವಿಸುವುದರಿಂದ ಅಂತಹ ದನಗಳನ್ನು ಹಿಡಿದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. 2018-19 ನೇ ಸಾಲಿನಲ್ಲಿ 20 ಮನೆಗಳು ಮಂಜೂರಾಗಿದ್ದು, ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿರುವುದಿಲ್ಲ. ಹಾಗೂ ಹೊಸ ಮನೆ ಇವರಿಗೆ ಬಂದಿಲ್ಲ, ಬಡವರಿಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗುತ್ತಿಲ್ಲ, ಈ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರಿಗೆ ತಿಳಿಸಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಬಾರದ ರೀತಿಯಲ್ಲಿ ವ್ಯಾಪಾರ ಮಾಡುವಂತೆ ತಿಳುವಳಿಕೆ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾಮ ಪಂಚಾಯತ್‌ನ ಮನೆತೆರಿಗೆ, ವ್ಯಾಪಾರ ಪರವಾನಿಗೆ, ಸ್ವಚ್ಚತಾ ಕರ, ನೀರಿನ ಕರ, ಕಟ್ಟುನಿಟ್ಟಾಗಿ ವಸೂಲಿ ಮಾಡುವುದು, ಈ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಬೀದಿಗಳಲ್ಲಿ ಕಸ ಎಸೆಯುವ ಬಗ್ಗೆ ದ್ವನಿವರ್ಧಕದ ಮೂಲಕ ಪ್ರಚಾರಪಡಿಸುವುದು ಎಂದು ತೀರ್ಮಾನಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಜಲಾಮೃತ ಯೋಜನೆಯಡಿ ಆಯ್ಕೆಯಾಗಿದ್ದು ಈ ಯೋಜನೆಯಡಿ ಕೃಷಿಕರಿಗೆ ತಡೆಗೋಡೆ, ಕಿಂಡಿ ಅಣೆಕಟ್ಟು ಇನ್ನಿತರ ಯೋಜನೆ ಜಾರಿಯಲ್ಲಿದ್ದು, ಕೃಷಿ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಸಭೆಯಲ್ಲಿ ಸೂಚಿಸಲಾಯಿತು.
ಈ ಸಭೆಯಲ್ಲಿ ಸದಸ್ಯರಾದ ಯಶೋದ ಕೆ.ಕೆ, ಆಶಾ ಎಂ.ಕೆ, ಲೆತಿಶ್ಯಾ ಡಿಸೋಜ, ಹಮೀದ್ ಜಿ.ಕೆ, ಸೋಮಶೇಖರ್ ಕೊಯಿಂಗಾಜೆ, ಅಬುಶಾಲಿ ಪಿ.ಕೆ, ನಾಗೇಶ್ ಪಿ.ಆರ್, ಷಣ್ಮುಗಂ ಎಸ್. ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago