ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.
ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…