ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.
ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…